Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ರಾಷ್ಟ್ರೀಯ ಕ್ರೀಡಾಕೂಟ: ಹೈಜಂಪ್‌ನಲ್ಲಿ ಚೇತನ್‌ಗೆ ಕಂಚಿನ ಪದಕ

ಅಹಮದಾಬಾದ್‌:

36ನೇ ರಾಷ್ಟ್ರೀಯ ಕ್ರಿಡಾಕೂಟದ ಅಥ್ಲೆಟಿಕ್ಸ್‌ನ ಹೈಜಂಪ್‌ ವಿಭಾಗದಲ್ಲಿ ಕರ್ನಾಟಕದ ಚೇತನ್‌ ಕಂಚಿನ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಸರ್ವಿಸಸ್‌ನ ಸರ್ವೇಶ್‌ 2.27 ಮೀ. ಎತ್ತರಕ್ಕೆ ಜಿಗಿದು ಚಿನ್ನ ಗೆದ್ದರೆ, ಕೇರಳ ಅರೋಮಲ್‌ 2.19 ಮೀ. ಎತ್ತರಕ್ಕೆ ಜಿಗಿದು ಬೆಳ್ಳಿ ಪದಕ ಗೆದ್ದರು. 2.17 ಮೀ ಎತ್ತರಕ್ಕೆ ಜಿಗಿದ ಚೇತನ್‌ ಹಾಗೂ ಭಾರತಿ ವಿ. ಕಂಚಿನ ಪದಕ ಗೆದ್ದರು.

ರಿಲೇಯಲ್ಲಿ ಕರ್ನಾಟಕದ ಮಹಿಳೆಯರ ತಂಡ ಕಂಚಿನ ಪದಕ ಗೆದ್ದಿದೆ. 4×400 ಮೀ. ರಿಲೆಯಲ್ಲಿ ವಿಜಯ ಕುಮಾರಿ, ಸಿಂಚಲ, ಇಂಚರ ಮತ್ತು ಲಿಖಿತ ಅವರನ್ನೊಳಗೊಂಡ ತಂಡ 3 ನಿಮಿಷ ಹಾಗೂ 36.50 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಗಳಿಸಿತು.

ಟೆನಿಸ್‌ನಲ್ಲಿ ಕರ್ನಾಟಕದ ಪುರುಷರ ತಂಡ ಕಂಚಿನ ಪದಕ ಗೆದ್ದು ಸಾಧನೆ ಮಾಡಿದೆ.


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.