Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಬೈಂದೂರಿನ ಮಣಿಕಂಠ ದೇಶದ ಅತ್ಯಂತ ವೇಗದ ಓಟಗಾರ

ಬೆಂಗಳೂರು: ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 62ನೇ ರಾಷ್ಟ್ರೀಯ ಓಪನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ National Open Athletics Championship ಉಡುಪಿ ಜಿಲ್ಲೆಯ ಬೈಂದೂರಿನ ಬಾಡ ಗ್ರಾಮದ ಮಣಿಕಂಠ ಎಚ್‌. ಎಚ್‌. 100 ಮೀಟರ್‌ ಓಟದಲ್ಲಿ ಚಿನ್ನದ ಪದಕ ಗೆದ್ದು ನೂತನ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಮೊದಲ ದಿನದ ಸೆಮಿಫೈನಲ್‌ಲ್ಲಿ 10.23 ಸೆಕೆಂಡುಗಳಲ್ಲಿ ಗುರಿ ತಲುಪಿಸ ಮಣಿಕಂಠ ಏಳು ವರ್ಷಗಳ ಹಿಂದಿನ ದಾಖಲೆ ಮುರಿದು ಭಾರತದ ಅತ್ಯಂತ ವೇಗದ ಓಟಗಾರರೆನಿಸಿದರು. ನಂತರ ಫೈನಲ್‌ ಸ್ಪರ್ಧೆಯಲ್ಲಿ 10.42 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದರು. “ಫೈನಲ್‌ ನಲ್ಲಿ ಗಾಳಿಯಿಂದಾಗಿ ಅದೇ ವೇಗವನ್ನು ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ,” ಎಂದು ಮಣಿಕಂಠ sportsmail ಗೆ ತಿಳಿಸಿದ್ದಾರೆ.

ಬೈಂದೂರಿನ ಬಡ ಕುಟುಂಬದಲ್ಲಿ ಜನಿಸಿದ ಮಣಿಕಂಠಗೆ ಚಿಕ್ಕಂದಿನಿಂದಲೂ ಕ್ರೀಡೆಯಲ್ಲಿ ಸಾಧನೆ ಮಾಡಬೇಕೆಂಬ ಹಂಬಲ. ಉಡುಪಿಯಲ್ಲಿ ಪದವಿಪೂರ್ವ ಶಿಕ್ಷಣ ಮುಗಿಸಿದ ಮಣಿಕಂಠಗೆ ಬೆಂಗಳೂರಿನಲ್ಲಿ ಕ್ರೀಡಾ ಹಾಸ್ಟೆಲ್‌ನಲ್ಲಿ ಹೆಚ್ಚಿನ ಅವಕಾಶ ಸಿಕ್ಕಿತು. ಅದೇ ಸಂದರ್ಭದಲ್ಲಿ ಭಾರತದ ಸೇನೆಯಲ್ಲಿ ಉದ್ಯೋಗವೂ ಸಿಕ್ಕಿತು. ಯೋಧನಾಗಿರುವ ಮಣಿಕಂಠಗೆ ಸರ್ವಿಸಸ್‌ ಉತ್ತಮ ಪ್ರೋತ್ಸಾಹವನ್ನು ನೀಡಿತು. ಪರಿಣಾಮ ಪ್ರತಿಯೊಂದು ಹಂತದಲ್ಲೂ ಯಶಸ್ಸು ಅವರ ಪಾಲಾಯಿತು.

“ಗೋವಾದಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರಿ ರಾಷ್ಟ್ರೀಯ ದಾಖಲೆಯನ್ನು ಮತ್ತೊಮ್ಮೆ ಮುರಿಯವ ಗುರಿ ಹೊಂದಿರುವೆ, ಕಾಮನ್‌ವೆಲ್ತ್‌, ಏಷ್ಯನ್‌ ಗೇಮ್ಸ್‌ಗಳಲ್ಲಿ ಪದಕ ಗೆದ್ದು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಗುರಿ ಇದೆ,” ಎಂದು ಮಣಿಕಂಠ ಹೇಳಿದ್ದಾರೆ.


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.