Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಬದುಕಿನ ಇನ್ನಿಂಗ್ಸ್ ಮುಗಿಸಿದ ವಾಡೇಕರ್

ಸ್ಪೋರ್ಟ್ಸ್ ಮೇಲ್ ವರದಿ

ಭಾರತ ಕ್ರಿಕೆಟ್ ತಂಡದ  ಮಾಜಿ ನಾಯಕ ಅಜಿತ್ ವಾಡೇಕರ್ ಬುಧವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಬಹಳ ವರ್ಷದಿಂದ ವಾಡೇಕರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.  1970 ರಲ್ಲಿ ಏಂಗಲ್ನ್ಡ್ ಹಾಗೂ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯೆಯಲ್ಲಿ ಭಾರತ ತಂಡವನ್ನು ಮುನ್ನಡೆಸಿ ಜಯ ತಂದು ಕೊಡುವ ಮೂಲಕ ವಾಡೇಕರ್ ಭಾರತ ಕ್ರಿಕೆಟ್ ನಲ್ಲಿ ಸದಾ ಸ್ಮರಣೀಯರೆನಿಸಿದ್ದಾರೆ.

 

ವಾಡೇಕರ್ ಅವರ ನಾಯಕತ್ವದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ನಲ್ಲಿ ಐದು ಪಂದ್ಯಗಳನ್ನು ಗೆದ್ದಿತ್ತು. ಅದೇ ರೀತಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ  ಸರಣಿಯಲ್ಲೂ ಜಯ ಗಳಿಸಿತ್ತು. ತಂಡ ಕಳಪೆ ಪ್ರದರ್ಶನ ತೋರಿದ ಹಿನ್ನಲೆಯಲ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿದರು. ನಿವೃತ್ತಿಯ ನಂತರ ಭಾರತ ಕ್ರಿಕೆಟ್ ತಂಡದ ಮ್ಯಾನೇಜರ್ ಆಗಿಯೂ ವಾಡೇಕರ್ ಸೇವೆ  ಸಲ್ಲಿಸಿದ್ದರು. ಟೆಸ್ಟ್ ಆಟಗಾರ, ಕ್ಯಾಪ್ಟನ್, ಮ್ಯಾನೇಜರ್, ಕೋಚ್ ಹಾಗೂ ಆಯ್ಕೆ ಸಮಿತಿಯ ಅಧ್ಯಕ್ಷ ಹೀಗೆ ಕ್ರಿಕೆಟ್ ನ ಹಲವು ಜವಾಬ್ಧಾರಿಯುತ ಸ್ಥಾನದಲ್ಲಿ ದುಡಿದ ಅಪೂರ್ವ ವ್ಯಕ್ತಿ ವಾಡೇಕರ್.


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.