Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಗಿಲ್‌, ಜಡೇಜಾ ಮಿಂಚು, ಭಾರತಕ್ಕೆ “ಶ್ರೇಯಸ್ಸು”

Sportsmail  

ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ ಶುಭ್ಮನ್‌ ಗಿಲ್‌, ರವೀಂದ್ರ ಜಡೇಜಾ ಮತ್ತು ಶ್ರೇಯಸ್‌ ಅಯ್ಯರ್‌ ಅವರ ಅರ್ಧ ಶತಕ ಭಾರತಕ್ಕೆ ಮೊದಲ ದಿನದ ಗೌರವ ನೀಡಿದೆ.

ಗಿಲ್‌ (52), ಜಡೇಜಾ (50*) ಮತ್ತು ಅಯ್ಯರ್‌ (75*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಭಾರತ ಮೊದಲ ದಿನದಾಟ ಮುಕ್ತಯಗೊಂಡಾಗ 4 ವಿಕೆಟ್‌ ನಷ್ಟಕ್ಕೆ 258 ರನ್‌ ಗಳಿಸಿದೆ. ನ್ಯೂಜಿಲೆಂಡ್‌ ಪರ ಕೇಲ್‌ ಜಾಮಿಸನ್‌ 43 ರನ್‌ಗೆ 3 ವಿಕೆಟ್‌ ಗಳಿಸಿ ಭಾರತದ ರನ್‌ ಗಳಿಕೆಗೆ ಕಡಿವಾಣ ಹಾಕಿದರು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಭಾರತದ ಪರ ಆರಂಭಿಕ ಆಟಗಾರ ಕನ್ನಡಿಗ ಮಯಾಂಕ್‌ ಅಗರ್ವಾನ್‌ ಮತ್ತೊಮ್ಮೆ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾದರು. ಕೇವಲ ಕೇವಲ 13 ರನ್‌ ಗಳಿಸಿ ನಿರಾಸೆ ಮೂಡಿಸಿದರು. ಆದರೆ ತಾಳ್ಮೆಯ ಆಟ ಪ್ರದರ್ಶಿಸಿದ ಗಿಲ್‌, 93 ಎಸೆತಗಳನ್ನೆದುರಿಸಿ 5 ಬೌಂಡರಿ ಮತ್ತು 1 ಸಿಕ್ಸರ್‌ ನೆರವಿನಿಂದ 52 ರನ್‌ ಸಿಡಿಸಿ ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳುವಂತೆ ಮಾಡಿದರು. ಚೇತೇಶ್ವರ ಪೂಜಾರ (26) ಮತ್ತು ನಾಯಕ ಅಜಿಂಕ್ಯಾ ರಹಾನೆ (35) ಕೂಡ ಕಿವೀಸ್‌ ದಾಳಿಯನ್ನು ಸಮರ್ಪಕವಾಗಿ ಎದುರಿಸದೆ ವಿಕೆಟ್‌ ಒಪ್ಪಿಸಿದರು.

ಚೊಚ್ಚಲ ಪಂದ್ಯವನ್ನಾಡಿದ ಶ್ರೇಯಸ್‌ ಅಯ್ಯರ್‌ ಅರ್ಧ ಶತಕದೊಂದಿಗೆ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. 136 ಎಸೆತಗಳನ್ನೆದುರಿಸಿದ ಅಯ್ಯರ್‌ 7 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ ಅಜೇಯ 75 ರನ್‌ ಸಿಡಿಸಿ ಎರಡನೇ ದಿನದಲ್ಲಿ ಶತಕ ಗಳಿಸುವ ಆತ್ಮವಿಶ್ವಾಸ ತೋರಿದ್ದಾರೆ. ಕ್ರಿಕೆಟ್‌ನ ಯಾವುದೇ ಮಾದರಿ ಇರಲಿ ಅಲ್ಲಿ ತಮ್ಮದೊಂದು ಛಾಪು ಮೂಡಿಸುವ ರವೀಂದ್ರ ಜಡೇಜಾ 100 ಎಸೆಗಳನ್ನೆದುರಿಸಿ 6 ಬೌಂಡರಿ ನೆರವಿನಿಂದ ಅಜೇಯ 50 ರನ್‌ ಸಿಡಿಸಿ ಎರಡನೇ ದಿನದವನ್ನು ಅಬ್ಬರದ ಆಟಕ್ಕೆ ಕಾಯ್ದಿರಿಸಿದ್ದಾರೆ.


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.