Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ವಿಶ್ವ ಜೂನಿಯರ್‌ ಅಥ್ಲೆಟಿಕ್ಸ್‌ಗೆ ಮೈಸೂರಿನ ಆರ್ಯನ್‌ ಕಶ್ಯಪ್‌

ಬೆಂಗಳೂರು:

ತಾಯಿಯ ಯಶಸ್ಸಿನ ಹೆಜ್ಜೆಯಲ್ಲೇ ಮುನ್ನಡೆದ ಕೊಡಗಿನ ಬಾಡರಕೇರಿಯ ಆರ್ಯನ್‌ ಪ್ರಜ್ವಲ್‌ ಕಶ್ಯಪ್‌ ಗುಜರಾತಿನಲ್ಲಿ ನಡೆಯುತ್ತಿರುವ ಫೆಡರೇಷನ್‌ ಕಪ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ 400 ಮೀ. ಹರ್ಡಲ್ಸ್‌ನಲ್ಲಿ ಬೆಳ್ಳಿಯ ಪದಕ ಗೆದ್ದು ಕೊಲಂಬಿಯಾದಲ್ಲಿ ನಡೆಯಲಿರುವ 20ವರ್ಷ ವಯೋಮಿತಿಯ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ಗೆ ಅರ್ಹತೆ ಪಡೆದಿದ್ದಾರೆ.

ವಿಶೇಷವೆಂದರೆ ಆರ್ಯನ್‌ ಪ್ರಜ್ವಲ್‌ ಕಶ್ಯಪ್‌ ಅವರ ತಾಯಿ ಸರೋಜ ಕೂಡ  ಹರ್ಡಲ್ಸ್‌ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನ ಗೆದ್ದು ಈಗ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಮೈಸೂರಿನ ಪ್ರಭಾಕರ್‌ ಅವರಲ್ಲಿ ತರಬೇತಿ ಪಡೆಯುತ್ತಿರುವ ಆರ್ಯನ್‌ಗೆ ಅಥ್ಲೆಟಿಕ್ಸ್‌ ಕೋಚ್‌ ಸುಮಂತ್‌ ಕೂಡ ಯಶಸ್ಸಿಗೆ ನೆರವು ನೀಡುತ್ತಿದ್ದಾರೆ. 52.75 ಸೆಕೆಂಡುಗಳಲ್ಲಿ ಗುರಿ ತಲುಪಿದ ಆರ್ಯನ್‌ ಬೆಳ್ಳಿ ಗೆದ್ದರು. ವಿಶ್ವ ಚಾಂಪಿಯನ್‌ಷಿಪ್‌ಗೆ ಅರ್ಹರಾಗಲು 53.20 ಸೆಕೆಂಡುಗಳಲ್ಲಿ ಗುರಿ ತಲುಪಬೇಕಾಗಿತ್ತು. ಪಂಜಾಬ್‌ನ ಹರ್ದೀಪ್‌ ಚಿನ್ನ ಗೆದ್ದರು.

ಕೃಷಿಕ ಜೋಯಪ್ಪ ಬಿ.ಎಂ. ಮತ್ತು ಸರೋಜ ದಂಪತಿಯ ಪುತ್ರರಾಗಿರುವ ಆರ್ಯನ್‌, ಮೈಸೂರಿನ ಮಹೇಶ್‌ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈಗಾಗಲೇ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಹರ್ಡಲ್ಸ್‌ನಲ್ಲಿ ಹಲವಾರು ಪದಕಗಳನ್ನು ಗೆದ್ದಿರುತ್ತಾರೆ.


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.