Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಭಟ್ಕಳದಲ್ಲಿ ರಾಷ್ಟ್ರೀಯ ಬೀಚ್‌ ಫುಟ್ಬಾಲ್‌ಗೆ ಆಯ್ಕೆ ಟ್ರಯಲ್ಸ್‌

ಬೆಂಗಳೂರು: ಗುಜರಾತ್‌ನ ಸೂರತ್‌ನಲ್ಲಿ ಜನವರಿ 24 ರಿಂದ ಫೆಬ್ರವರಿ 1 ರವೆಗೆ ದೇಶದಲ್ಲಿ ಮೊದಲ ಬಾರಿಗೆ ನಡೆಯಲಿರುವ ಹೀರೋ ರಾಷ್ಟ್ರೀಯ ಫುಟ್ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ತಂಡದ ಆಯ್ಕೆ ಟ್ರಯಲ್ಸ್‌ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯಲಿದೆ.

ಭಟ್ಕಳದಲ್ಲಿ ಜನವರಿ 7 ಮತ್ತು 8 ರಂದು ಆಯ್ಕೆ ಟ್ರಯಲ್ಸ್‌ ನಡೆಯಲಿದ್ದು, ಆಸಕ್ತರು ಬೆಂಗಳೂರು ಫಟ್ಬಾಲ್‌ ಕ್ರೀಡಾಂಗಣದಲ್ಲಿರುವ ಕರ್ನಾಟಕ ರಾಜ್ಯ ಫುಟ್ಬಾಲ್‌ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು. ಅಥವಾ ceoksfa@gmail.com ಗೆ ಮೇಲ್‌ ಮಾಡಿ ತಮ್ಮ ಹೆಸರನ್ನು ನೋದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಲೀಂ -8050296058 ಅಥವಾ ಆದಿತ್ಯ 7338584114 ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಬಹದು ಎಂದು ಕರ್ನಾಟಕ ರಾಜ್ಯ ಫುಟ್ಬಾಲ್‌ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ. ಸತ್ಯನಾರಾಯಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುಜರಾತ್‌ ಫುಟ್ಬಾಲ್‌ ಸಂಸ್ಥೆಯ ಆಶ್ರದಯಲ್ಲಿ ನಡೆಯಲಿರುವ ಈ ಚಾಂಪಿಯನ್‌ಷಿಪ್‌ನಲ್ಲಿ ದೇಶದ 20ಕ್ಕೂ ಹೆಚ್ಚು ತಂಡಗಳು ಪಾಲ್ಗೊಳ್ಳಲಿವೆ. ಗುಜರಾತ್‌ನ ದುಮಾಸ್‌ ಬೀಚ್‌ನಲ್ಲಿ ಈ ಚೊಚ್ಚಲ ಚಾಂಪಿಯನ್‌ಷಿಪ್‌ ನಡೆಯಲಿದೆ.

ಡಿ ಗುಂಪಿನಲ್ಲಿ ಕರ್ನಾಟಕ: ಕರ್ನಾಟಕ ತಂಡ ಡಿ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಗೋವಾ, ಅರುಣಾಚಲಪ್ರದೇಶ, ದಾದರ್‌ ಮತ್ತು ನಾಗರಹವೇಲಿ, ಅಂಡಮಾನ್‌ ಮತ್ತು ದಿವು ಹಾಗೂ ಒಡಿಶಾ ತಂಡಗಳು ಸೇರಿವೆ.

ಎ ಗುಂಪು: ಹಿಮಾಚಲ ಪ್ರದೇಶ, ಜಾರ್ಖಂಡ್‌, ಬಿಹಾರ, ಲಕ್ಷದ್ವೀಪ, ಅಂಡಮಾನ್‌ ಮತ್ತು ನಿಕೋಬಾರ್‌.

ಬಿ ಗುಂಪು: ಗುಜರಾತ್‌, ರಾಜಸ್ಥಾನ್‌, ಸರ್ವಿಸಸ್‌, ಕೇರಳ ಮತ್ತು ಮಧ್ಯಪ್ರದೇಶ್‌.

ಸಿ ಗುಂಪು: ಮಿಜೋರಂ, ಆಂಧ್ರಪ್ರದೇಶ್‌, ಉತ್ತರಾಖಂಡ್‌, ಮಣಿಪುರ ಮತ್ತು ದೆಹಲಿ.

 


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.