Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಕಿಕ್‌ ಬಾಕ್ಸಿಂಗ್‌: ನಾಕೌಟ್‌ಗೆ ಬಲಿಯಾದ ಮೈಸೂರಿನ ಫೈಟರ್‌ ನಿಖಿಲ್‌

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ K1 ಕಿಕ್‌ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರಿನ ಬಾಕ್ಸರ್‌ ನಿಖಿಲ್‌ ಸಾವನ್ನಪ್ಪಿದ್ದಾರೆ.

K1 ಕಿಕ್‌ ಬಾಕ್ಸಿಂಗ್‌ ಅಸೋಸಿಯೇಷನ್‌ ಜುಲೈ 9 ಮತ್ತು 10ರಂದು ಕಿಕ್‌ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ ಆಯೋಜಿಸಿತ್ತು. ಮೈಸೂರಿನ ವಿಕ್ರಮ್‌ ಮೈಸೂರು ನಾಗರಾಜ್‌ ಅವರ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದ ನಿಖಿಲ್‌ ಉತ್ತಮ ಫೈಟರ್‌ ಕೂಡ ಹೌದು. ಆದರೆ ನಾಕೌಟ್‌ಗೆ ತುತ್ತಾದ ನಿಖಿಲ್‌ ಮತ್ತೆ ಚೇತರಿಸಿಕೊಳ್ಳದೆ ಸಾವಿಗೆ ಶರಣಾದರು.

ಸರಕಾರದ ಗಮನ ಅಗತ್ಯ: ಕ್ರೀಡಾ ಇಲಾಖೆಯ ಮಾನ್ಯತೆ ಪಡೆಯದೆ, ಭಾರತೀಯ ಒಲಿಂಪಿಕ್ಸ್‌ ಸಂಸ್ಥೆಯ ಅನುಮತಿ ಇಲ್ಲದೆ, ತಜ್ಞರಿಂದ ತರಬೇತಿ ಪಡೆಯದೆ ಕಿಕ್‌ ಬಾಕ್ಸಿಂಗ್‌ ತರಬೇತಿ ನೀಡುವ ಕೋಚ್‌ಗಳು ಮತ್ತು ತರಬೇತಿ ಕೇಂದ್ರಗಳ ಕಡಿವಾಣದ ಅಗತ್ಯವಿದೆ. ಜೀವಕ್ಕೆ ಅಪಯಾದವಾಗಿರುವ ಈ ಕ್ರೀಡೆಗಳ ಕೂಟವನ್ನು ಆಯೋಜಿಸುವಾಗ ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು.


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.