Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಸದರ್ನ್ ವಾರಿಯರ್ಸ್ ತಂಡಕ್ಕೆ ಪ್ರಶಸ್ತಿ

ಸ್ಪೋರ್ಟ್ಸ್ ಮೇಲ್ ವರದಿ

ದಸರಾ ಕ್ರೀಡಾಕೂಟದ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಬೆಂಗಳೂರಿನ ಸದರ್ನ್ ವಾರಿಯರ್ಸ್ ತಂಡ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಯೂತ್ ಸ್ಪೋರ್ಟ್ಸ್ ಕ್ಲಬ್ ವಿರುದ್ಧ ಜಯ ಗಳಿಸಿ ಸಿಎಂ ಕಪ್ ಗೆದ್ದುಕೊಂಡಿದೆ.

ಪ್ರಶಸ್ತಿ ಸುತ್ತಿನಲ್ಲಿ ಸದರ್ನ್ ವಾರಿಯರ್ಸ್ ತಂಡ  38-37 ಅಂತರದಲ್ಲಿ ರೋಚಕ ಜಯ ಗಳಿಸಿ ಚಾಂಪಿಯನ್ ಪಟ್ಟ ಗೆದ್ದುಕೊಂಡಿತು. ಬೆಂಗಳೂರಿನ ಯೂತ್ ಸ್ಪೋರ್ಟ್ಸ್ ಕ್ಲಬ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತು.
ಮೂರು ಮತ್ತು ನಾಲ್ಕನೇ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ  ಹಾಸನ ಜಿಲ್ಲಾ ತಂಡ ಚಿಕ್ಕಮಗಳೂರು ತಂಡವನ್ನು 33-17 ಅಂಕಗಳ ಅಂತರದಲ್ಲಿ ಮಣಿಸಿ ಕಂಚಿನ ಪದಕ ಗೆದ್ದುಕೊಂಡಿತು.
ಮಹಿಳಾ ವಿಭಾಗದಲ್ಲಿ ಬೆಂಗಳೂರಿನ ಜೀಲ್ ಸ್ಪೋರ್ಟ್ಸ್ ಕ್ಲಬ್ ಬೆಂಗಳೂರು ಗ್ರಾಮೀಣ ಯೂತ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ತಂಡವನ್ನು 35-22 ಅಂಕಗಳ ಅಂತರದಲ್ಲಿ ಮಣಿಸಿ ಚಿನ್ನದ ಪದಕ ಗೆದ್ದುಕೊಂಡಿತು. 13 ಅಂಕಗಳಿಂದ ಸೋತ ಯೂತ್ ಸ್ಟಾರ್‌ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತು.
ಮೂರು ಮತ್ತು ನಾಲ್ಕನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಬಿಎಂಎಸ್‌ಸಿಡಬ್ಲ್ಯು ತಂಡ 20-12 ಅಂತರದಲ್ಲಿ ದಾವಣಗೆರೆ ಜಿಲ್ಲಾ ತಂಡವನ್ನು ಸೋಲಿಸಿ ಕಂಚಿನ ಪದಕ ಗೆದ್ದುಕೊಂಡಿತು.
ಮೊದಲ ಬಹುಮಾನ ಗಳಿಸಿದ ಸದರ್ನ್ ವಾರಿಯರ್ಸ್ ತಂಡ 40,000, ಯೂತ್ ಸ್ಟಾರ್ಸ್ ಸ್ಪೋರ್ಟ್ಸ್ ಅಕಾಡೆಮಿ 25,000 ಹಾಗೂ ಹಾಸನ ಜಿಲ್ಲಾ ತಂಡ 15,000 ರೂ. ನಗದು ಬಹುಮಾನ ಗಳಿಸಿದವು.

administrator