Saturday, July 27, 2024

ಕನ್ನಡಿಗ ಸುಹಾಸ್‌ಗೆ ಯೋಗಿ ಆದಿತ್ಯನಾಥ್‌ ಅಭಿನಂದನೆ

ಎರಡು ದಿನಗಳ ಹಿಂದೆ ಮುಕ್ತಾಯಗೊಂಡ ಏಷ್ಯನ್‌ ಪ್ಯಾರಾ ಗೇಮ್ಸ್‌ನ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದ ಕರ್ನಾಟಕ ಮೂಲದ ಐಎಎಸ್‌ ಅಧಿಕಾರಿ ಸುಹಾಸ್‌ ಲಾಲಿನಕೆರೆ ಯತಿರಾಜ್‌ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಭಿನಂದಿಸಿದರು. UP Chief Minister Yogi Adityanath Congratulates Gold Medalist IAS Officer Suhas LY.

ಹಾಂಗ್ಜೌನಲ್ಲಿ ನಡೆದ ಕ್ರೀಡಾಕೂಟದಲ್ಲಿ ಸುಹಾಸ್‌ ಉತ್ತಮ ಪೈಪೋಟಿ ನೀಡಿ ಬಲಿಷ್ಠ ಎದುರಾಳಿಗಳನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದರು. ಅರ್ಜುನ ಪ್ರಶಸ್ತಿ ವಿಜೇತ ಸುಹಾಸ್‌ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜನಸ್ನೇಹಿ ಅಧಿಕಾರಿ ಎನಿಸಿದ್ದಾರೆ. ಈ ಹಿಂದೆ ಏಷ್ಯನ್‌ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದಾಗ ಉತ್ತರ ಪ್ರದೇಶ ಸರಕಾರ ರಾಜ್ಯದ ಶ್ರೇಷ್ಠ ನಾಗರಿಕ ಪ್ರಶಸ್ತಿಯಾಗಿರುವ “ಯಶ್‌ ಭಾರತಿ” ಪ್ರಶಸ್ತಿ ನೀಡಿ ಗೌರವಿಸಿತ್ತು. ಸುಹಾಸ್‌ ಅವರು ಮೂಲತಃ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯವರು.

Related Articles